ನವದೆಹಲಿ: ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಸಕ್ರಿಯವಾಗಿರುವ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಮುಸ್ಲಿಮರ ಮನವೊಲಿಸಲು ಯತ್ನಿಸಿದ್ದಾರೆ.
3 ಮಂದಿರಗಳನ್ನು ನಮಗೆ ಕೊಟ್ಟು, 39 , 997 ಮಸೀದಿಗಳನ್ನು ಉಳಿಸಿಕೊಳ್ಳಿ ಎಂದು ಮುಸ್ಲಿಮರಿಗೆ ಹೇಳಿರುವ ಸುಬ್ರಹ್ಮಣಿಯನ್ ಸ್ವಾಮಿ ಮುಸ್ಲಿಂ ಸಮುದಾಯಕ್ಕೆ ಹಿಂದೂಗಳಿಂದ ಶ್ರೀಕೃಷ್ಣ ಪರಮಾತ್ಮನ ಪ್ಯಾಕೇಜ್ ನೀಡಲಾಗುತ್ತಿದ್ದು ಮುಸ್ಲಿಮರು ದುರ್ಯೋದನನಂತೆ ವರ್ತಿಸುವುದಿಲ್ಲ ಎಂಬ ನಂಬಿಕೆ ಇದೆ ಎಂದಿದ್ದಾರೆ.
ಈ ಹಿಂದೆ ರಾಮ ಮಂದಿರ ನಿರ್ಮಾಣ ವಿಷಯವನ್ನು ರಾಜಕೀಯ ವಿಷಯವನ್ನಾಗಿ ಪರಿಗಣಿಸಬಾರದು ಎಂದು ಸ್ವಾಮಿ ಹೇಳಿದ್ದರು. ನಾವು ಮಂದಿರವನ್ನು ಈ ವರ್ಷ ನಿರ್ಮಿಸಲು ಸಾಧ್ಯವಾಗದಿರಬಹುದು. ಆದರೆ ಮುಂದಿನ ವರ್ಷ ಚುನಾವಣೆ ಇದು ಅದರ ಮುಂದಿನ ವರ್ಷ ಅಂದರೆ 2018ರಲ್ಲಿ ಮಂದಿರ ನಿರ್ಮಾಣ ಮಾಡುತ್ತೇವೆ.
ನಿನ್ನೆ ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಪನ್ಯಾಸಕ್ಕೆ ಕೆಲ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸ್ವಾಮಿ, ಇದು ಅಸಹಿಷ್ಣುತೆ ಎಂದಿದ್ದರು.