ರಾಷ್ಟ್ರೀಯ

ನಾನು ಏನು ಹೇಳಬೇಕಿರುವುದನ್ನು ನಾಗಪುರದಲ್ಲೇ ಹೇಳುತ್ತೇನೆ; ಪ್ರಣಬ್ ಮುಖರ್ಜಿ

Pinterest LinkedIn Tumblr


ಹೊಸದಿಲ್ಲಿ: ನಾಗಪುರದಲ್ಲಿ ಜೂನ್ 7ರಂದು ನಡೆಯಲಿರುವ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕುರಿತು ಮೌನ ಮುರಿದಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ನಾನು ಏನನ್ನು ಹೇಳಬೇಕೆಂದಿದ್ದೇನೋ, ಅದನ್ನು ನಾಗಪುರದ ಕಾರ್ಯಕ್ರಮದಲ್ಲೇ ಹೇಳುವುದಾಗಿ ತಿಳಿಸಿದ್ದಾರೆ.

ಅವರ ಹೇಳಿಕೆಯನ್ನು ಉಲ್ಲೇಖಿಸಿ ಬಂಗಾಳಿ ಪತ್ರಿಕೆಯೊಂದು ವರದಿ ಮಾಡಿದ್ದು, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಹಲವು ಫೋನ್‌ ಕರೆಗಳು, ಪತ್ರಗಳು ಬಂದಿವೆ. ಆದರೆ ಅದ್ಯಾವುದಕ್ಕೂ ನಾನು ಪ್ರತಿಕ್ರಿಯಿಸಿಲ್ಲ ಎಂದು ಪ್ರಣಬ್ ಹೇಳಿದ್ದಾರೆ ಎಂದಿದೆ.

ಆರ್‌ಎಸ್‌ಎಸ್‌ನ ಪ್ರಧಾನ ಕಚೇರಿ ಇರುವ ನಾಗಪುರದಲ್ಲಿ ತೃತೀಯ ವರ್ಷ ವರ್ಗದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯನ್ನಾಗಿ ಪ್ರಣಬ್‌ರನ್ನು ಆಹ್ವಾನಿಸಲಾಗಿದೆ. ಕಾಂಗ್ರೆಸ್‌ ನಾಯಕನಿಗೆ ಆರ್‌ಎಸ್ಎಸ್‌ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅದನ್ನು ಸಮರ್ಥಿಸಿಕೊಂಡಿತ್ತು.

ಹಲವು ಕಾಂಗ್ರೆಸ್ ನಾಯಕರು ಪ್ರಣಬ್‌ಗೆ ಕರೆ ಮಾಡಿ ಮತ್ತು ಪತ್ರ ಬರೆದು ಕಾರ್ಯಕ್ರಮದಲ್ಲಿ ಭಾಗವಹಿಸಬೇಡಿ ಎಂದಿದ್ದರೆ, ಮತ್ತೆ ಕೆಲವರು ಆರ್‌ಎಸ್‌ಎಸ್‌ ವಿರುದ್ಧವಾಗಿ ಮಾತನಾಡಲು ವೇದಿಕೆಯನ್ನು ಬಳಸಿಕೊಳ್ಳಿ ಎಂದಿದ್ದಾರೆ.

Comments are closed.