ರಾಷ್ಟ್ರೀಯ

ನಿರ್ಭಯಾ ಸಾಮೂಹಿಕ ಅತ್ಯಾಚಾರ -ಕೊಲೆ ಪ್ರಕರಣ: ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಸುಪ್ರೀಂ ಕೋರ್ಟ್

Pinterest LinkedIn Tumblr

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಗಲ್ಲು ಶಿಕ್ಷೆ ಖಾಯಂಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಆರ್ ಬಾನುಮತಿ ಹಾಗೂ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠ, ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕು ಎಂದು ಕೋರಿ ಮೂವರು ಅಪರಾಧಿಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಇಂದು ವಜಾಗೊಳಿಸಿದೆ.

ಒಟ್ಟು ನಾಲ್ಕು ಅಪರಾಧಿಗಳ ಪೈಕಿ ಮೂವರು ಅಪರಾಧಿಗಳಾದ ಮುಕೇಶ್ (31), ಪವನ್ ಗುಪ್ತ(31), ವಿನಯ್ ಶರ್ಮಾ (25) ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

2012ರಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಅಮಾನುಷ ಕೊಲೆ ಪ್ರಕರಣ ಸಂಪೂರ್ಣ ದೇಶವನ್ನು ಬೆಚ್ಚಿಬೀಳಿಸಿತ್ತು. ಘಟನೆಗೆ ಸಂಬಂಧಿಸಿದಂತೆ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗಿತ್ತು.

Comments are closed.