ಕರಾವಳಿ

ಶ್ರೀಕರ ಪ್ರಭು ಬೃಹತ್ ಪಾದಯಾತ್ರೆ : ಗಮನ ಸೆಳೆದ ಜ್ಯೂನಿಯರ್ ಮೋದಿ

Pinterest LinkedIn Tumblr

ಮಂಗಳೂರು, ಮೇ 4: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿರುವಂತೆಯೇ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಕೂಡ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ.

ಮನೆ ಮನೆ ಭೇಟಿಯ ಬಳಿಕ ಐದನೆ ಹಂತದಲ್ಲಿ ರೋಡ್ ಶೋ ನಡೆಸುವ ಮೂಲಕ ತಮ್ಮ ಪ್ರಬಲ ಜನಬೆಂಬಲವನ್ನು ಸಾಬೀತು ಪಡಿಸಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಬಾಹುಳ್ಯದ ರಥಬೀದಿಯಲ್ಲಿ ತಮ್ಮ ಬೃಹತ್ ಪಾದಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಕರ ಪ್ರಭು ಮತದಾರರನ್ನು ಸೆಳೆಯುವ ಎಲ್ಲ ಲಕ್ಷಣಗಳನ್ನು ಪ್ರದರ್ಶಿಸಿದ್ದಾರೆ. ತಮ್ಮ ಚುನಾವಣಾ ಚಿಹ್ನೆಯಾದ ಆಟೋ ರಿಕ್ಷಾದ ಮಾದರಿಯನ್ನು ರಿಕ್ಷಾ ಚಾಲಕರಿಗೆ ನೀಡುವ ಮೂಲಕ ಶ್ರೀಕರ ಪ್ರಭು ಅಭಿಯಾನವನ್ನು ಆರಂಭಿಸಿದ್ದಾರೆ.ಇನ್ನು 5 ದಿನಗಳ ಕಾಲ ಮಂಗಳೂರಿನ ಪ್ರಮುಖ ಬೀದಿಗಳಲ್ಲಿ ಶ್ರೀಕರ ಪ್ರಭು ರೋಡ್ ಶೋ ನಡೆಸುವ ಮೂಲಕ ಎಲ್ಲರ ಗಮನ ಸೆಳೆಯಲಿದ್ದಾರೆ.

ಪ್ರಾರಂಭದಲ್ಲಿ ಶ್ರೀಕರ ಪ್ರಭು ಕುಟುಂಬ, ಅಭಿಮಾನಿಗಳು ರಥಬೀದಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪರ್ವದಿನದಂದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀಕರ ಪ್ರಭು ಅಭಿಮಾನಿ ಬಳಗದ ಅದ್ಯಕ್ಷ ಕೆ.ಪಿ. ಶೆಟ್ಟಿ ಬೇಡೆಮಾರ್, ಕಾರ್ಯದರ್ಶಿ ಪ್ರೇಮ್ ಚಂದ್ರ, ಉಸ್ತುವಾರಿ ಸುರೇಶ ಶೆಟ್ಟಿ, ಸಂಯೋಜಕ ಅವಿನಾಶ್ ಶೆಟ್ಟಿ, ಚಿತ್ರಕಲಾ ಪ್ರಭು, ಸೀಮಾ ಪ್ರಭು, ಐಶ್ವರ್ಯ ನಾಯಕ್, ಮಾಯಾ ನಾಯಕ್, ಶರತ್ ಅಮೀನ್, ನಿತಿನ್ ಸುವರ್ಣ, ಅಶ್ವಿತ್ ಕುಮಾರ್, ವಸಂತ್ ಪ್ರಭು, ಭಾಸ್ಕರ್ ಗಟ್ಟಿ, ಅನಿಲ್ ಕುಮಾರ್, ಆನಂದ ಶೆಟ್ಟಿ, ವೆಂಕಟರಮಣ ಮಲ್ಯ, ಜೈರಾಮ್ ಕಾಮತ್, ರಾಮ್ ಮೋಹನ್, ಮಹೇಶ್ ಭಟ್, ಸೂರಜ್ ಪ್ರಭು, ರಘುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಗಮನ ಸೆಳೆದ ಜ್ಯೂನಿಯರ್ ಮೋದಿ :

ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರ ಪರ ಪ್ರಚಾರದಲ್ಲಿ ತೊಡಗಿರುವ ಮಂಗಳೂರಿನ ಜ್ಯೂನಿಯರ್ ಮೋದಿ ಎಂದೇ ಖ್ಯಾತಿ ಪಡೆದ ರಥಬೀದಿಯ ವಸಂತ ಪ್ರಭು ಒಂದು ಕೈಯಲ್ಲಿ ರಿಕ್ಷಾದ ಪ್ರತಿಕೃತಿ ಇನ್ನೊಂದು ಕೈಯಲ್ಲಿ ಪ್ಯಾಂಪ್ಲೆಟ್ ಹಿಡಿದು ರೋಡ್ ಶೋದಲ್ಲಿ ಹೆಜ್ಜೆ ಹಾಕಿದರು. ಈ ಮೂಲಕ ನರೇಂದ್ರ ಮೋದಿ ಅವರನ್ನು ಹೋಲುವ ಜ್ಯೂನಿಯರ್ ನರೇಂದ್ರ ಮೋದಿ ಅವರು ಎಲ್ಲರ ಗಮನಸೆಳೆದರು.

Comments are closed.