ಕರಾವಳಿ

ಬಂಟ್ವಾಳದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ; ಪೊಲೀಸರಿಂದ ಲಘು ಲಾಠಿ ಪ್ರಹಾರ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಬಂಟ್ವಾಳ, ಮೇ 10: ಒಂದು ಪಕ್ಷದ ಕಾರ್ಯಕರ್ತರ ವಿರುದ್ಧ ಧಿಕ್ಕಾರ ಕೂಗಿದ ಹಿನ್ನೆಲೆಯಲ್ಲಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ನಂದಾವರ ದೇವಸ್ಥಾನದ ಸಮೀಪ ಬುಧವಾರ ರಾತ್ರಿ ನಡೆದಿದೆ.

ಬುಧವಾರ ರಾತ್ರಿ ನಂದಾವರದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಯಲ್ಲಿ ಪಕ್ಷದ ಸಭೆ ನಡೆದಿದ್ದು, ಈ ಸಭೆಗೆ ಇಲ್ಲಿನ ಬಿಜೆಪಿಯ ಕಾರ್ಯಕರ್ತರು ತೆರಳಿದ್ದು, ಸಭೆ ಮುಗಿದ ಬಳಿಕ ಇನ್ನೊಂದು ಪಕ್ಷದ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ್ದು, ಇದರಿಂದ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಇದರಿಂದ ಓರ್ವನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಧಾವಿಸಿದ ಬಂಟ್ವಾಳ ಠಾಣೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಪರಿಸರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Comments are closed.