ಕರಾವಳಿ

ಪರೀಕ್ಷೆಗೆಂದು ತೆರಳಿದ ಬಿ.ಎಸ್.ಸಿ ವಿದ್ಯಾರ್ಥಿನಿ ನಾಪತ್ತೆ

Pinterest LinkedIn Tumblr

ಉಡುಪಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆಂದು ತೆರಳಿದ್ದು ಬಳಿಕ ಕಾಣೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮೃತಾ ಆರ್ ಜೈನ್ (18) ಕಾಣೆಯಾದ ಯುವತಿ.

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮೊದಲ ವರ್ಷದ ಬಿ.ಎಸ್.ಸಿ ಕಲಿಯುತ್ತಿರುವ ನಮೃತಾ ಮೇ.೮ ರಂದು ಬೆಳಗ್ಗೆ ೭ ಗಂಟೆಗೆ ಪರೀಕ್ಷೆ ಬರೆಯುವ ಬಗ್ಗೆ ಕಾಲೇಜಿಗೆ ಹೊಗಿದ್ದು ಬಳಿಕ ವಾಪಸ್ಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈಕೆ ಪತ್ತೆಯಾದಲ್ಲಿ ಪೊಲೀಸ್ ಉಪನಿರೀಕ್ಷಕರು,ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Comments are closed.