ಕರಾವಳಿ

ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಹಲ್ಲೆಗೆ ತಕ್ಕ ಉತ್ತರ ನೀಡುತ್ತೇವೆ: ರಾಕೇಶ್ ಮಲ್ಲಿ

Pinterest LinkedIn Tumblr

ಕುಂದಾಪುರ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಕಾಂಗ್ರೆಸ್ ಶಕ್ತಿಯನ್ನು ಕುಗ್ಗಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಿದ್ದು ಇದಕ್ಕೆ ಕಾಂಗ್ರೆಸ್ ತಕ್ಕ ಉತ್ತರ ನೀಡಲಿದೆ ಎಂದು ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದ್ರು.

ತಾಲೂಕಿನಲ್ಲಿ ಮೂರು ಪ್ರಕರಣಗಳು ನಡೆದಿದ್ದು ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಹಾಗೂ ದಬ್ಬಾಳಿಕೆ ನಡೆದಿದೆ. ರಾಜಕೀಯದಲ್ಲಿ ಇದೆಲ್ಲಾ ಸರಿಯಲ್ಲ. ಇಂತಹ ಘಟನೆಯನ್ನು ಕಂಡು ಸುಮ್ಮನೆ ಕೂರಲ್ಲ, ನ್ಯಾಯಯುತವಾಗಿ ಹೋರಾಡುತ್ತೇವೆ. ಇಲಾಖೆಯೂ ಕೂಡ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಇಂತಹ ಕ್ರತ್ಯ ಮಾಡಲಾಗುತ್ತಿದ್ದು ಇದಕ್ಕೆ ಬಿಜೆಪಿ ನಾಯಕರ ಕುಮ್ಮಕ್ಕು ಕಾರಣ ಎಂದು ಆರೋಪಿಸಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯೆ ಜ್ಯೋತಿ ಪುತ್ರನ್, ಹಿರಿಯ ಮುಖಂಡ ಮಾಣಿಗೋಪಾಲ್ ಮೊದಲಾದವರಿದ್ದರು.

Comments are closed.