ಕರಾವಳಿ

ನ.3:ಯಕ್ಷಧ್ರುವ ಪಟ್ಲ ಫೌಂಡೇಶನ್ ಗುಜರಾತ್ ಘಟಕದ ವಾರ್ಷಿಕೋತ್ಸವ – ಮಂಗಳೂರು ಘಟಕಕ್ಕೆ ಅಹ್ವಾನ

Pinterest LinkedIn Tumblr

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗುಜರಾತ್ ಘಟಕದ ವತಿಯಿಂದ ನವಂಬರ್ 3ರಂದು ಜರಗುವ ವಾರ್ಷಿಕೋತ್ಸವ ದ ಆಮಂತ್ರಣ ಪತ್ರಿಕೆ ಯನ್ನು ಗುಜರಾತ್ ಘಟಕದ ಪದಾಧಿಕಾರಿಗಳು ಮಂಗಳೂರಿಗೆ ಆಗಮಿಸಿ ಕೇಂದ್ರೀಯ ಸಮಿತಿಗೆ ನೀಡಿ, ಪಟ್ಲ ಫೌಂಡೇಶನಿನ ಎಲ್ಲಾ ಘಟಕಗಳ ಸದಸ್ಯರನ್ನು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಗುಜರಾತ್ ಘಟಕದ ಅಧ್ಯಕ್ಷರಾದ ಆಜಿತ್ ಶೆಟ್ಟಿ ಅಂಕಲೇಶ್ವರ, ಪದಾಧಿಕಾರಿಗಳಾದ ಸತೀಶ್ ಶೆಟ್ಟಿ, ಉಜ್ವಲ್ ಶೆಟ್ಟಿ , ಗುಜರಾತ್ ತುಳು ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ್ ಶೆಟ್ಟಿ, ಪಟ್ಲ ಫೌಂಡೇಶನಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಮಸ್ಕತ್ ಘಟಕದ ಲೇಶ್ ಶೆಟ್ಟಿ ಒಂಟಿಕಟ್ಟೆ, ಟ್ರಸ್ಟಿ ರವಿ ಶೆಟ್ಟಿ ಅಶೋಕನಗರ ಪತ್ರಕರ್ತ ನವೀನ್ ಶೆಟ್ಟಿ ಎಡ್ಮೆಮಾರ್ ಉಪಸ್ಥಿತರಿದ್ದರು.

Comments are closed.