ಕರಾವಳಿ

ಶಾಸಕ ಕಾಮಾತ್‌ರಿಂದ ಕಣ್ಣೂರು ವೀರನಗರ ರಸ್ತೆಯ ಕಾಂಕ್ರೀಟಿಕರಣಕ್ಕೆ ಶಿಲಾನ್ಯಾಸ

Pinterest LinkedIn Tumblr

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 52 ನೇ ಕಣ್ಣೂರು ವಾರ್ಡಿನ ವೀರನಗರದ ಟ್ಯಾಂಕ್ ರಸ್ತೆಯ ಕಾಂಕ್ರೀಟಿಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಬುಧವಾರ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು ಮಂಗಳೂರು ನಗರ ಮುಂದಿನ ದಿನಗಳಲ್ಲಿ ಹೊಸ ರೂಪವನ್ನು ಪಡೆಯುವಲ್ಲಿ ಶಾಸಕರ ಪ್ರದೇಶಾಭಿವೃದ್ಧಿಯನ್ನು ಸಮರ್ಥವಾಗಿ ಬಳಸಿಕೊಳ್ಳಲಾಗುವುದು. ಕಣ್ಣೂರಿನ ವೀರನಗರದ ಈ ಭಾಗದ ಜನರು ಟ್ಯಾಂಕ್ ರಸ್ತೆಗೆ ಕಾಂಕ್ರೀಟಿಕರಣ ಮತ್ತು ಚರಂಡಿ ಕಾಮಗಾರಿ ಮಾಡಲು ಮನವಿ ಮಾಡಿದ್ದರು.

ಆ ನಿಟ್ಟಿನಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 12.5 ಲಕ್ಷ ವೆಚ್ಚದಲ್ಲಿ ಇಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಶಾಸಕರೊಂದಿಗೆ ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಭಾಜಪಾ ಮುಖಂಡರಾದ ವಿಶ್ವನಾಥ, ಗೀತಾನಂದ ಶೆಟ್ಟಿ, ವಸಂತ ಶೆಟ್ಟಿ, ಮಹಿಳಾ ಮೋರ್ಚಾ ಪ್ರಮುಖರಾದ ಸುನೀತಾ, ಅರುಣಾ ಮತ್ತು ಸ್ಥಳೀಯರು ಉಪಸ್ಥಿತರಿದ್ದರು

Comments are closed.