ಕರಾವಳಿ

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯ ಸ್ಥಿರ- ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ

Pinterest LinkedIn Tumblr

ಉಡುಪಿ: ಇತ್ತೀಚಿನ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್. ಮುತ್ತಪ್ಪ ರೈ ಯವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುಳ್ಳುಸುದ್ದಿಗಳನ್ನು ಕೆಲವು ಕಿಡಿಗೇಡಿಗಳು ಹಬ್ಬಿಸುತ್ತಿದ್ದು ಇದು ಸತ್ಯಕ್ಕೆ ದೂರವಾದ ವಿಚಾರ ಎಂದು ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

(ಮುತ್ತಪ್ಪ ರೈ)

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಮಾಜದ ಬಗ್ಗೆ ಕಳಕಳಿ ಹೊಂದಿರುವ ಸುಮಾರು ನಲವತ್ತು ಲಕ್ಷಕ್ಕೂ ಅಧಿಕ ಕಾರ್ಯಕರ್ತರನ್ನು ಹೊಂದಿ ಅನೇಕ ಜನಪರ ಕಾರ್ಯಗಳನ್ನು ನಡೆಸಲು ಪ್ರೇರಣೆ ನೀಡುತ್ತಿರುವ ಮುತ್ತಪ್ಪ ರೈಯವರು ಆರೋಗ್ಯ ವಾಗಿದ್ದು ಕೆಲವು ವಿಕೃತ ವ್ಯಕ್ತಿಗಳು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಗಳನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುತ್ತಿರುವಿದು ಖಂಡನೀಯ. ಎಲ್ಲಾ ಕಡೆ ಕೊರೋನಾ ವೈರಸ್ ನಿಂದಾಗಿ ಜನತೆ ಪರಿತಪಿಸುತ್ತಿರುವಾಗ ಇಂತಹ ಸುದ್ದಿಗಳು ನಮ್ಮ ಕಾರ್ಯಕರ್ತರನ್ನು ಮತ್ತು ರೈ ಅವರ ಅಭಿಮಾನಿಗಳನ್ನು ಮತ್ತಷ್ಟು ಗೊಂದಲಕ್ಕೆ ಎಡೆಮಾಡಿಕೊಡುತ್ತದೆನಮ್ಮ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಯವರು ಆರೋಗ್ಯವಾಗಿದ್ದು ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಲಾಗಿ ತಾನು ಆರೋಗ್ಯವಾಗಿದ್ದು , ರಾಜ್ಯದ ಜನತೆ ಕೊರೋನಾ ವೈರಸ್ ಬಗ್ಗೆ ಜಾಗ್ರತರಾಗಿ ಇರಬೇಕು ಸರ್ಕಾರ ಸೂಚಿಸಿದ ಮಾರ್ಗದರ್ಶನ ಪಾಲಿಸಬೇಕು, ಕಾರ್ಯಕರ್ತರು ಆದಷ್ಟು ಜನಸಾಮಾನ್ಯರಿಗೆ ತಮ್ಮಲ್ಲಾದ ನೆರವು ನೀಡಬೇಕು ಎಂದು ತಿಳಿಸಿದ್ದಾರೆ.

(ಜಯಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ)

ಆದ್ದರಿಂದ ಯಾರೂ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ನಂಬಬಾರದು‌ ಎಂದು ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.