ಉಡುಪಿ: ವಿಶ್ವ ಪರಿಸರ ದಿನಾಚರಣೆಯಂದು, ಅದಮಾರು ಮಠದ ಆವರಣದಲ್ಲಿ , ಅದಮಾರು ಶ್ರೀಗಳು ಗಿಡ ನೆಡುವುದರ ಮೂಲಕ ಎಲ್ಲರಿಗೂ ಸ್ಪೂರ್ತಿಯಾದರು. ಮಠದ ಅವರಣದಲ್ಲಿ ಗಿಡ ನೆಟ್ಟು ಮಾತನಾಡಿದ ಶ್ರೀಗಳು, ಗಿಡ ಮರಗಳು ಹಾಗೂ ಪ್ರಕೃತಿಯ ಸಂರಕ್ಷಣೆ ಪ್ರಸ್ತುತ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುರಾಗಬೇಕು ಎಂದರು.
ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ಮಾತನಾಡಿ, ಅರಣ್ಯ ಇಲಾಖೆವತಿಯಿಂದ , ನಿನ್ನೆಯಿಂದ 2 ತಿಂಗಳ ಕಾಲ ಜಿಲ್ಲೆಯಾದ್ಯಂತ ಗಿಡ ನೆಡುವ ಅಭಿಯಾನ ನಡೆಯಲಿದೆ, ಸಾರ್ವಜನಿಕರು ಗಿಡ ಮರಗಳನ್ನು ರಕ್ಷಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಮಠದ ಸಿಬ್ಬಂದಿಗಳು ಉಪಸ್ಥಿತರಿದ್ದರು
Comments are closed.