ಕರ್ನಾಟಕ

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಜಗದೀಶ್ ಹತ್ಯೆ ಆರೋಪಿಗಳು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

Pinterest LinkedIn Tumblr

harish-madhu

ನೆಲಮಂಗಲ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಜಗದೀಶ್ ಹತ್ಯೆ ಆರೋಪಿಗಳನ್ನು ಕೋರ್ಟ್ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಆರೋಪಿಗಳಾದ ಮಧು, ಹರೀಶ್ ಬಾಬುರನ್ನು ಇಂದು ನೆಲಮಂಗಲದ ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಪೊಲೀಸರ ಮನವಿ ಆಲಿಸಿದ ನ್ಯಾಯಮೂರ್ತಿಗಳಾದ ಪ್ರಕಾಶ್ ಅವರು ಆರೋಪಿಗಳನ್ನು ನವೆಂಬರ್ 4 ವರೆಗೆ ಪೊಲೀಸ್ ಕಸ್ಟಡಿಗೆ ಆದೇಶಿಸಿದ್ದಾರೆ.

ಅಕ್ಟೋಬರ್ 16ರಂದು ಜಗದೀಶ್ ರನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಹರೀಶ್ ಬಾಬು (48) ಮತ್ತು ಮಧು (26) ಅವರನ್ನು ಮಹಾರಾಷ್ಟ್ರ ಕ್ರೈಂ ಬ್ರಾಂಚ್ ಪೊಲೀಸರು ನಾಗಪುರ ರೈಲು ನಿಲ್ದಾಣದಲ್ಲಿ ಬಂಧಿಸಿದ್ದರು.

Write A Comment