ಕರ್ನಾಟಕ

ಐಎಸ್‌ಐಎಸ್ ಕರಪತ್ರ ಹಂಚಿದವನ ಗಡಿಪಾರಿಗೆ ಆಗ್ರಹಿಸಿ ಹೊಸಪೇಟೆ ಬಂದ್

Pinterest LinkedIn Tumblr

hosapeteಬಳ್ಳಾರಿ, ಡಿ.28-ಐಎಸ್‌ಐಎಸ್ ಚಿಹ್ನೆ ಹೊಂದಿದ ಕರಪತ್ರಗಳನ್ನು ಹಂಚುತ್ತಿದ್ದ ವ್ಯಕ್ತಿಯನ್ನು ಕೂಡಲೇ ಗಡಿಪಾರು ಮಾಡಬೇಕು, ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳು ನಗರದಲ್ಲಿ ನಾಳೆ ಬೃಹತ್ ಪ್ರತಿಭಟನೆ ಮತ್ತು ಹೊಸಪೇಟೆ ಬಂದ್ ಹಮ್ಮಿಕೊಂಡಿದೆ.

ವಿಶ್ವಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಮತ್ತಿತರ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮತ್ತು ಬಂದ್‌ನಲ್ಲಿ ಭಾಗವಹಿಸಲಿವೆ. ಬಂದ್ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ವಿಶ್ವಹಿಂದೂ ಪರಿಷತ್ ಮುಖಂಡರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಿನ್ನೆ ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿ ಈಗ ಯಥಾಸ್ಥಿತಿಗೆ ಮರಳಿದೆ.

ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸ ಲಾಗಿದ್ದು, ಜಿಲ್ಲಾ ಹೆಚ್ಚುವರಿ ಎಸ್ಪಿ ನಗರದಲ್ಲಿ ಮೊಕ್ಕಾಂ ಹೂಡಿದ್ದಾರೆ.

Write A Comment