ಬೆಂಗಳೂರು, ಡಿ.30- ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಜಾದವ್ ವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಅರವಿಂದ್ ಜಾದವ್ ಪ್ರಸ್ತುತ ಕೆಎಟಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಕರ್ನಾಟಕ ಕೇಡರ್ನ 1978ರ ಬ್ಯಾಚ್ನ ಐಎಎಸ್ ಅಧಿಕಾರಿ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮೇಶ್, ಎಸ್.ಕೆ.ಪಟ್ನಾಯಕ್, ರತ್ನಪ್ರಭಾ ಅವರ ನಡುವೆ ಮುಖ್ಯ ಕಾರ್ಯದರ್ಶಿ ಹುದ್ದೆಗಾಗಿ ಪೈಪೋಟಿ ಏರ್ಪಟ್ಟಿತ್ತು.
ಕೊನೆ ಗಳಿಗೆಯಲ್ಲಿ ರಾಜ್ಯ ಸರ್ಕಾರ ಅರವಿಂದ್ ಜಾದವ್ ಅವರ ಸೇವಾ ಹಿರಿತನ ಪರಿಗಣಿಸಿ ಅವರನ್ನೇ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.