ಕರ್ನಾಟಕ

ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಮೂವರು ಆತ್ಮಹತ್ಯೆ

Pinterest LinkedIn Tumblr

suicide

ಮೈಸೂರು: ಇಬ್ಬರು ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾಯಿ ಕೂಡಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಬಡಗಲಪುರದ ನಿವಾಸಿಗಳಾದ ತಾಯಿ ಗೀತಾ(೨೮) ಹರ್ಷಿತ್(೮) ಮತ್ತು ಸಿಂಚನ್(೬) ಮೃತ ದುರ್ದೈವಿಗಳಾಗಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ ನುಗು ಜಲಾಶಯಕ್ಕೆ ತೆರಳಿ ತನ್ನ ಇಬ್ಬರು ಮಕ್ಕಳನ್ನು ಜಲಾಶಯಕ್ಕೆ ತಳ್ಳಿ, ತಾಯಿ ಗೀತಾ ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಗೀತಾ ೧೦ ವರ್ಷಗಳ ಹಿಂದೆ ಸಣ್ಣಸ್ವಾಮಿ ಎಂಬಾತನೊಂದಿಗೆ ವಿವಾಹವಾಗಿದ್ದಳು. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಮೂರು ಮೃತದೇಹಗಳನ್ನು ಹೊರತೆಗೆದು, ಸ್ಥಳೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಸರಗೂರು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Write A Comment