ಕರ್ನಾಟಕ

ಬೈಕ್-ಕಾರು ಮುಖಾಮುಖಿ ಡಿಕ್ಕಿ, ದಂಪತಿ ಸಾವು

Pinterest LinkedIn Tumblr

dar

ಧಾರವಾಡ: ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ದಂಪತಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಪ್ರಭುಪ್ರಸಾದ (45) ಮತ್ತು ಸಹನಾ (40) ಮೃತ ದುರ್ದೈವಿಗಳಾಗಿದ್ದಾರೆ.

ಗಂಭೀರ ಗಾಯಗೊಂಡಿದ್ದ ಪ್ರಸಾದ ಸ್ಥಳದಲ್ಲಿಯೇ ಮೃತಪಟ್ಟರೆ, ಸಹನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಲ್ಲಿನ ಯರಿಕೊಪ್ಪ ಮತ್ತು ಇಟಿಗಟ್ಟಿ ಮಧ್ಯೆ ಈ ಅಪಘಾತ ಸಂಭವಿಸಿದೆ.

ಪ್ರಸಾದ ತಮ್ಮ ಪತ್ನಿಯೊಂದಿಗೆ ಧಾರವಾಡದತ್ತ ಬೈಕ್​ನಲ್ಲಿ ವಾಪಸ್ಸಾಗುತ್ತಿರುವಾಗ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಮೃತ ಪ್ರಸಾದ ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷರಾಗಿದ್ದು, ನಿವೃತ್ತ ಪ್ರಾಧ್ಯಾಪಕ ಡಾ. ಡಿ.ಎಂ.ಹಿರೇಮಠ ಅವರ ಪುತ್ರರಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment