ಕರ್ನಾಟಕ

ಕುಡಿದ ಮತ್ತಿನಲ್ಲಿ ಯಡವಟ್ಟು: ಸೊಳ್ಳೆಬತ್ತಿಯಿಂದ ಹೊತ್ತಿಉರಿದ ಮನೆ

Pinterest LinkedIn Tumblr

solle

ಬೆಂಗಳೂರು, ಜ.6- ಕುಡಿದ ಮತ್ತಿನಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತಪಟ್ಟಿದ್ದು, ಆತನ ಕೈಲ್ಲಿದ್ದ ಸೊಳ್ಳೆಬತ್ತಿಯಿಂದ ಮನೆಗೆ ಬೆಂಕಿ ಹೊತ್ತಿಕೊಂಡ ಘಟನೆ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುವೆಂಪುನಗರ ವಾಸಿ ಮಾದವನ್(55) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಮಗ ಕೆಲಸಕ್ಕೆ ಹೋಗಿದ್ದು, ಮಾದವನ್ ಒಬ್ಬರೇ ಮನೆಯಲ್ಲಿದ್ದರು. ಕುಡಿದ ಮತ್ತಿನಲ್ಲಿ ಪವರ್‌ಸಾಕೆಟ್‌ನೊಳಗೆ ಕೈ ಇಟ್ಟಿದ್ದಾನೆ. ಇದರಿಂದಾಗಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿದ್ದಾನೆ. ಇದೇ ವೇಳೆ ಆತನ ಕೈಯಲ್ಲಿದ್ದ ಸೊಳ್ಳೆಬತ್ತಿಯಿಂದ ಹಾಸಿಗೆಗೆ ಬೆಂಕಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಿಗೆ ಇಡೀ ಮನೆಯನ್ನೇ ವ್ಯಾಪಿಸಿದೆ.

ಮನೆಯೊಳಗಿನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಕ್ಕ-ಪಕ್ಕದ ಮನೆಯವರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಆಂಬುಲೆನ್ಸ್‌ಗೆ ಕರೆಸಿ ಮಾದವನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾದವನ್ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಈ ಸಂಬಂಧ ರಾಮಮೂರ್ತಿನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಧ್ಯೆ ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದಾಗಿ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Write A Comment