ಕರ್ನಾಟಕ

ಹಾಡಹಗಲೇ ರೌಡಿಗಳ ಅಟ್ಟಹಾಸ; ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಯ ಕೊಲೆ

Pinterest LinkedIn Tumblr

Murderಬೆಂಗಳೂರು: ಉದ್ಯಾನನಗರಿಯಲ್ಲಿ ಹಾಡಹಗಲೇ ರೌಡಿಗಳ ಅಟ್ಟಹಾಸ ಮುಂದುವರಿದಿದ್ದು, ಹೆಬ್ಬಾಳ ಬಳಿಯ ಗುಡ್ಡದಹಳ್ಳಿ ಸರ್ಕಲ್ ಬಳಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೆಬ್ಬಾಳ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸತೀಶ್ ಆಲಿಯಾಸ್ ಗುಂಡ(30ವರ್ಷ) ಎಂಬಾತನನ್ನು ಮತ್ತೊಂದು ಗುಂಪು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿದೆ. ಸ್ಥಳಕ್ಕೆ ಹೆಬ್ಬಾಳ ಪೊಲೀಸ್ ಠಾಣಾಧಿಕಾರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
-ಉದಯವಾಣಿ

Write A Comment