ಕರ್ನಾಟಕ

ಆಮ್ನೆಸ್ಟಿ ಸಂಸ್ಥೆಗೆ ಕ್ಲೀನ್‍ಚಿಟ್ ನೀಡಿಲ್ಲ: ಪರಮೇಶ್ವರ್

Pinterest LinkedIn Tumblr

G-Parameshwaraಬೆಂಗಳೂರು: ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಆಮ್ನೆಸ್ಟಿ ಸಂಸ್ಥೆಗೆ ಕ್ಲೀನ್ ಚಿಟ್ ನೀಡಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಆಮ್ನೆಸ್ಟಿಯವರು ಯಾವುದೇ ತಪ್ಪನ್ನು ಮಾಡಿಲ್ಲ, ಎಲ್ಲವೂ ಸರಿಯಿದೆ ಎಂದು ಹೇಳಲು ನಾನೇನು ಮೂರ್ಖನಲ್ಲ. ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಗೆ ಯಾವುದೇ ರೀತಿಯ ಕ್ಲೀನ್ ಚಿಟ್ ನೀಡಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ದೇಶದಾದ್ಯಂತ ಭುಗೆಲೆದ್ದಿರುವ ಆಮ್ನೆಸ್ಟಿ ವಿವಾದದ ಬಗ್ಗೆ ಶನಿವಾರ ಕೆಪಿಸಿಸಿ ಪುರಭವನದಲ್ಲಿ ನಡೆದ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪರಮೇಶ್ವರ್ ಅವರು, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ದೇಶದ್ರೋಹದ ಕೆಲಸ ಮಾಡಿದೆ ಎಂದು ನನಗೆ ಅನಿಸುತ್ತಿಲ್ಲ ಎಂದಿದ್ದರು, ಪರಮೇಶ್ವರ್ ಅವರ ಈ ಹೇಳಿಕೆ ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು. ಅಲ್ಲದೆ, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.

ಇದೀಗ ನಾನು ಹಾಗೆ ಹೇಳಿಲ್ಲ ಎಂದು ಪರಮೇಶ್ವರ್ ಯು ಟರ್ನ್ ಹೊಡೆದಿದ್ದಾರೆ.

Comments are closed.