ಕರ್ನಾಟಕ

ಜನಾರ್ದನ ರೆಡ್ಡಿಗೆ ಶಾಕ್ ನೀಡಿದ ಸುಪ್ರೀಂ ! ‘ಬಳ್ಳಾರಿಯಲ್ಲಿ ಚುನಾವಣಾ ಪ್ರಚಾರ ಮಾಡುವ ಅಗತ್ಯವಿಲ್ಲ’

Pinterest LinkedIn Tumblr

ನವದೆಹಲಿ: ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಸದ್ಯ ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.ಈ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಪ್ರಚಾರ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ತಮ್ಮ ಸಹೋದರ ಸೋಮಶೇಖರ ರೆಡ್ಡಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಅವರ ಪರವಾಗಿ ಪ್ರಚಾರ ನಡೆಸಲು ಅವಕಾಶ ನೀಡಬೇಕೆಂದು ಸುಪ್ರೀಂಕೋರ್ಟ್ ಗೆ ಜನಾರ್ದನ ರೆಡ್ಡಿ ಮನವಿ ಮಾಡಿದ್ದರು.

ಷರತ್ತು ಬದ್ದ ಜಾಮೀನು ನೀಡಿದ್ದು, ಜನಾರ್ದನ ರೆಡ್ಡಿ ಮತ ಚಲಾಯಿಸಬೇಕಾಗಿದೆ, ಅದಕ್ಕಾಗಿ ಷರತ್ತುಗಳನ್ನು ಸಡಿಲಗೊಳಿಸಬೇಕೆಂದು ರೆಡ್ಡಿ ಪರ ವಕೀಲ ವಾದ ಮಾಡಿದರು. ಆದರೆ ಕೋರ್ಟ್ ರೆಡ್ಡಿ ಪರ ವಕೀಲರ ವಾದವನ್ನು ತಳ್ಳಿ ಹಾಕಿದೆ.

Comments are closed.