ಕರ್ನಾಟಕ

ರೈತರಿಗಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ: ಯಡಿಯೂರಪ್ಪ ಘೋಷಣೆ

Pinterest LinkedIn Tumblr


ಹಿರೇಕೆರೂರು: ‘ನಾನು ರೈತರಿಗಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ’ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

‘ಅಧಿಕಾರಕ್ಕೆ ಬಂದ 24 ಗಂಟೆಗಳ ಒಳಗೆ ರೈತರ ಸಾಲ ಮನ್ನಾ ಮಾಡುತ್ತೇನೆ .ಇಲ್ಲವಾದಲ್ಲಿ ನನ್ನನ್ನು ಯಡಿಯೂರಪ್ಪ ಅಂತ ಕರೆಯಬೇಡಿ’ ಎಂದರು.

‘ರೈತರ ಬೆಳಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕು, ರೈತರು ನೆಮ್ಮದಿಯಿಂದ ಬದುಕಬೇಕು ಇದು ನಮ್ಮ ಗುರಿ. ಬೆಳೆ ಹಾನಿಯಾದಲ್ಲಿ ಪರಿಹಾರಕ್ಕಾಗಿ 5 ಸಾವಿರ ಕೋಟಿ ಮೀಸಲಿಡುತ್ತೇವೆ.ನಮ್ಮ ಪ್ರಣಾಳಿಕೆಯೇ ಮುಂದಿನ ಬಜೆಟ್‌ ‘ಎಂದರು.

‘ನಾನು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವುದು ಖಚಿತ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಬರುವುದಕ್ಕೆ ಒಪ್ಪಿದ್ದಾರೆ’ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

-Udayavani

Comments are closed.