ಕರ್ನಾಟಕ

ನನ್ನ ತಾಯಿ ಇಟಾಲಿಯನ್ ಆಗಿರಬಹುದು…ಭಾರತಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ: ರಾಹುಲ್ ಗಾಂಧಿ

Pinterest LinkedIn Tumblr

ಬೆಂಗಳೂರು: ‘ನನ್ನ ತಾಯಿ ಸೋನಿಯಾ ಗಾಂಧಿ ಇಟಾಲಿಯನ್. ಆದರೆ, ಭಾರತದಲ್ಲಿ ಬಹಳಷ್ಟು ದಿನ ಕಳೆದಿದ್ದು, ಈ ದೇಶಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ ಕನ್ನಡ ಅಸ್ಮಿತೆ ಮೇಲೆ ನಡೆಯುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಕನ್ನಡ ಅಸ್ಮಿತೆ ಮೇಲೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಅತಂತ್ರ ಸ್ಥಿತಿ ಬರುಲು ಸಾಧ್ಯವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಸವ ತತ್ವವೇ ಕಾಂಗ್ರೆಸ್‌ನ ತತ್ವವಾಗಿದ್ದು, ಅದೇ ನಮಗೆ ಸ್ಪಿರಿಟ್. ಕರ್ನಾಟಕದ ಮೇಲೆ ಹಿಡಿತ ಸಾದಿಸಲು ಆರ್‌ಎಸ್‌ಎಸ್‌ನವರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಬಿಜೆಪಿ ಒಂದು ಪ್ಯಾನಿಕ್ ಪಾರ್ಟಿ. ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಅವರು ಹತ್ತಿಕುತ್ತಿದ್ದಾರೆ. ಆಹಾರ ಸಂಸ್ಕೃತಿಯ ಮೇಲೆ ಆರ್‌ಎಸ್ಎಸ್ ದಾಳಿ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಬಸವಣ್ಣನವರ ತತ್ವ ಸಿದ್ದಾಂತದ ಮೇಲೆ ನಂಬಿಕೆ ಇಟ್ಟು ನಡೆಯುತ್ತಿದೆ ಎಂದು ಅವರು ಹೇಳಿದರು.

‘ಪ್ರಚಾರದ ವೇಳೆ ಹಲವು ದೇವಸ್ಥಾನ, ಮಸೀದಿ ಹಾಗೂ ಚರ್ಚ್‌ಗಳಿಗೆ ಭೇಟಿ ನೀಡಿದ್ದೇನೆ. ನಮಗೆ ಎಲ್ಲ ಸಮುದಾಯಗಳೂ ಮುಖ್ಯ. ಅವರು ಬೇಡ, ಇವರು ಬೇಡ ಎನ್ನುವ ಪಕ್ಷ ನಮ್ಮದಲ್ಲ’ ಎಂದು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದರು.

Comments are closed.