ಬಳ್ಳಾರಿ: ‘ಪೇಜಾವರ ವಿಶ್ವೇಶ್ವರ ಸ್ವಾಮೀಜಿಗೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಸಮಗ್ರವಾಗಿ ತಿಳಿದಿಲ್ಲ. ಅವರು ಯುಪಿಎ ಸರ್ಕಾರದ 10 ವರ್ಷ ಹಾಗೂ ಎನ್ಡಿಎ ಸರ್ಕಾರದ 4 ವರ್ಷಗಳ ಅವಧಿಯ ಅಭಿವೃದ್ಧಿ ಕಾರ್ಯಗಳನ್ನು ಹೋಲಿಕೆ ಮಾಡಿ ನೋಡಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
‘ವೈಯಕ್ತಿಕವಾಗಿ ಭೇಟಿ ಮಾಡಿ ಪೇಜಾವರ ಶ್ರೀಗಳಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ವಾಜಪೇಯಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಸೂಕ್ತ ಪ್ರಚಾರದ ಕೊರತೆಯಿಂದ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಯಿತು. ಇದೀಗ ನರೇಂದ್ರ ಮೋದಿ ಸರ್ಕಾರದ ವಿರುದ್ಧ ದೇಶೀಯರ ಜತೆಗೆ ವಿದೇಶಿಯರು ಕೈ ಜೋಡಿಸಿದ್ದಾರೆ’ ಎಂದರು.
ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಆಡಳಿತ ನಿರೀಕ್ಷಿತ ಮಟ್ಟದಲ್ಲಿ ತೃಪ್ತಿ ತಂದಿಲ್ಲ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದರು.
Comments are closed.