ಕರ್ನಾಟಕ

ಮಾಸ್ತಿಗುಡಿ ನಿರ್ಮಾಪಕ ನ್ಯಾಯಾಲಯಕ್ಕೆ ಹಾಜರು, ಜಾಮೀನು ಮಂಜೂರು

Pinterest LinkedIn Tumblr


ರಾಮನಗರ: ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಖಳನಟರಿಬ್ಬರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ. ಗೌಡ ಅವರಿಗೆ ರಾಮನಗರ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ನಿರ್ಮಾಪಕ ಸುಂದರ್ ಪಿ.ಗೌಡ ಅವರು ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ ಜತೆ ನ್ಯಾಯಾಧೀಶ ಗೋಪಾಲ್ ರೈ ಮುಂದೆ ಹಾಜರಾಗಿದ್ದರು.

ಸುಂದರ್​ ಗೌಡ ವಿರುದ್ಧ ರಾಮನಗರ 3ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಮೇ 30 ರಂದು ವಾರಂಟ್ ಜಾರಿ ಮಾಡಿತ್ತು. ವಾರಂಟ್ ನೀಡಲು ತೆರಳಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸುಂದರ್​ ಪರಾರಿಯಾಗಿದ್ದರು. ನಟ ದುನಿಯಾ ವಿಜಯ್ ಜತೆ ಪೊಲೀಸರು ಮಾತುಕತೆ ನಡೆಸುತ್ತಿದ್ದಾಗ ಸುಂದರ್​ ನಾಪತ್ತೆಯಾಗಿದ್ದರು.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್, ಸುಂದರ್​ ಗೌಡಗಾಗಿ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಶೋಧ ನಡೆಸಿದ್ದರು.

Comments are closed.