ಕರ್ನಾಟಕ

ಗೌರಿ ಲಂಕೇಶ್ ಹತ್ಯೆ: ಶ್ರೀರಾಮಸೇನೆಯ ವಿಜಯಪುರ ಜಿಲ್ಲಾಧ್ಯಕ್ಷರಿಗೆ ಎಸ್‌ಐಟಿ ಬುಲಾವ್‌

Pinterest LinkedIn Tumblr


ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಕುಟುಂಬಕ್ಕೆ ಸಹಾಯಹಸ್ತ ಚಾಚುವ ಕುರಿತು ಫೇಸ್‌ಬುಕ್‌ನಲ್ಲಿ ಮನವಿ ಮಾಡಿದ್ದ ಶ್ರೀರಾಮಸೇನೆ ಜಿಲ್ಲಾಧ್ಯಕ್ಷರಿಗೆ ಎಸ್‌ಐಟಿ ಬುಲಾವ್‌ ನೀಡಿದೆ.

ಶ್ರೀರಾಮಸೇನೆ ಹೆಸರಿನ ಫೇಸಬುಕ್‌ ಪೇಜ್‌ ಹಾಗೂ ರಾಕೇಶ ಮಠ ಎಂಬ ಹೆಸರಿನ ಫೇಸ್ ಬುಕ್ ಪೇಜ್‌ನಲ್ಲಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ವಿಜಯಪುರ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಾಕೇಶ್‌ ಮಠ ಎಂಬಾತನನ್ನು ಎಸ್​ಐಟಿ ವಿಚಾರಣೆಗೆ ಕರೆದಿದೆ.

ಈ ಹಿನ್ನೆಲೆಯಲ್ಲಿ ಪರಶುರಾಮ್ ವಾಗ್ಮೋರೆ ತಂದೆ ಅಶೋಕ ವಾಗ್ಮೋರೆ ಮತ್ತು ಮಾವ ಅಶೋಕ ಕಾಂಬಳೆ ಜತೆ ರಾಕೇಶ ಮಠ ಬೆಂಗಳೂರಿಗೆ ರಾತ್ರಿ 8 ಗಂಟೆಗೆ ಪ್ರಯಾಣ ಬೆಳೆಸಲಿದ್ದಾರೆ.

ಹಿಂದೂ ಧರ್ಮದ ರಕ್ಷಕ ಎಂದು ಅಭಿಯಾನ

ಸಾಮಾಜಿಕ ಜಾಲ ತಾಣ ಫೇಸ್‌ಬುಕ್‌ನಲ್ಲಿ ಧರ್ಮ ರಕ್ಷಣೆಗಾಗಿ ನಿಮ್ಮ ಪಾಲಿರಲಿ ಎಂದು ಫೋಸ್ಟ್ ಮಾಡಿದ ರಾಕೇಶ ಮಠ. ಪರಶುರಾಮ ಕುಟುಂಬ ಸಂಕಷ್ಟದಲ್ಲಿದ್ದು, ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಪರಶುರಾಮ ಕುಟುಂಬಸ್ಥರ ಅಕೌಂಟ್ ನಂಬರ್ ಹಾಕಿ ಮನವಿ ಮಾಡಿ, ಜೈ ಪರಶುರಾಮ್, ಜೈ ಮಂಗಲಪಾಂಡೆ, ಜೈ ನಾಥೂರಾಮ್ ಘೋಡ್ಸೆ ಎಂದು ಪ್ರಚಾರ ಮಾಡುತ್ತಿದ್ದರು.

ಎರಡು ದಿನಗಳಿಂದ ಪರಶುರಾಮ ಧರ್ಮ ರಕ್ಷಕ‌ ಎಂದು ಫೋಟೊ ವೈರಲ್ ಮಾಡಿದ್ದ ಸಂಘಟನೆ ಕಾರ್ಯಕರ್ತರು ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿದ್ದರು. ಆದರೆ ಈ ಹಿಂದೆ ಬಂಧಿತ ಯುವಕರು ಸಂಘಟನೆಗೆ ಸೇರಿದವರಲ್ಲ ಎಂದು ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದರು.

Comments are closed.