ಕರ್ನಾಟಕ

ಗೌರಿ ಲಂಕೇಶ್ ಹತ್ಯೆ ಆರೋಪಿ ಬಂಧನ: ಸಿದ್ದರಾಮಯ್ಯಗೆ ಕವಿತಾ ಲಂಕೇಶ್ ಧನ್ಯವಾದ

Pinterest LinkedIn Tumblr


ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಮೃತರ ಸಹೋದರಿ ಕವಿತಾ ಲಂಕೇಶ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.

ಭೇಟಿ ಬಳಿಕ ವರದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವಿಶೇಷ ತನಿಖಾ ತಂಡ ರಚಿಸಿದ್ದರು. ಆರೋಪಿ ಈಗ ಎಸ್ಐಟಿ ವಶದಲ್ಲಿದ್ದಾನೆ. ಹಾಗಾಗಿ ಸಿದ್ದರಾಮಯ್ಯನವರಿಗೆ ಕೃತಜ್ಞತೆ ತಿಳಿಸಲು ಬಂದಿದ್ದೇನೆ, ಎಂದರು.

ಆರೋಪಿ ಬಂಧನದಿಂದ ಗೌರಿಗೆ ನ್ಯಾಯ ಸಿಗುವ ವಿಶ್ವಾಸವಿದೆ, ಎಂದವರು ಹೇಳಿದ್ದಾರೆ.

ಗೌರಿ ಲಂಕೇಶ್‌ಗೆ ಗುಂಡ್ಡಿಕ್ಕಿರುವ ಆರೋಪಿ ಪರಶುರಾಮ್ ವಾಗ್ಮೋರೆ ಈಗ ವಿಶೇಷ ತನಿಖಾ ತಂಡದ ವಶದಲ್ಲಿದ್ದು, ಆತ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ

Comments are closed.