ಕರ್ನಾಟಕ

ಗೌರಿ ಲಂಕೇಶ್ ಹತ್ಯೆ: ತುಮಕೂರಿನ ಇನ್ನೋರ್ವ ಆರೋಪಿ ಬಂಧನ

Pinterest LinkedIn Tumblr


ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ತುಮಕೂರು ಮೂಲದ ಎಚ್‌.ಎಲ್‌.ಸುರೇಶ್‌ ಎನ್ನುವವನಾಗಿದ್ದು, ಅಧಿಕಾರಿಗಳು 3 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಈಗಾಗಲೇ ಶೂಟರ್‌ ಪರಶುರಾಮ್‌ ವಾಗ್‌ಮೋರೆ , ನವೀನ್‌ ಕುಮಾರ್‌, ಪ್ರವೀಣ್‌ ಕುಮಾರ್‌, ಅಮೋಲ್‌ ಕಾಳೆ, ಅಮಿತ್‌ ದೇಗ್ವೇಕರ್‌, ಮನೋಹರ್‌ ಯಡವೆ ಹಾಗೂ ಮೋಹನ್‌ ನಾಯಕ್‌ನನ್ನು ಎನ್ನುವ ಆರೋಪಿಗಳನ್ನು ಬಂಧಿಸಲಾಗಿದೆ. ಈಗ ಬಂಧಿತರ ಸಂಖ್ಯೆ 8ಕ್ಕೇರಿದೆ.

Comments are closed.