ಕರ್ನಾಟಕ

ಸಿನಿಮೀಯ ರೀತಿಯಲ್ಲಿ ವ್ಯಕ್ತಿಯೊಬ್ಬನ್ನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

Pinterest LinkedIn Tumblr


ಬೆಂಗಳೂರು: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಕಲಾಸಿಪಾಳ್ಯದ ಬಂಬುಬಜಾರ್​ನಲ್ಲಿರುವ ಲಕ್ಕಿ ಟೀ ಸ್ಟಾಲ್ ಬಳಿ ನಡೆದಿದೆ.

ಅಮೀನ್ ಕೊಲೆಯಾದ ದುರ್ದೈವಿ. ಮೃತ ಅಮೀನ್​ ಬಂಬುಬಜಾರ್​ನ ಹಾರ್ಡ್​ವೇರ್ ಮಳಿಗೆಯಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ಅಂಗಡಿಯಲ್ಲಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ 15 ಕ್ಕೂ ಹೆಚ್ಚು ದುಷ್ಕರ್ಮಿಗಳು ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.

ಈ ಹಿಂದೆ ಅಮೀನ್ ಸಹೋದರರು ಹಾಗೂ ಮೈಸೂರು ಮೂಲದ ವ್ಯಕ್ತಿಯೋರ್ವನ ಜತೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಮೈಸೂರು ಮೂಲದ ವ್ಯಕ್ತಿಗಳಿಂದಲೇ ಅಮೀನ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಡಿಸಿಪಿ ರವಿ ಡಿ ಚೆನ್ನಣ್ಣನವರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

Comments are closed.