ಮೈಸೂರು: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿಯನ್ನು ಲಕ್ಷ್ಮಿ (23) ಎಂದು ಗುರುತಿಸಲಾಗಿದೆ. ನಂಜನಗೂಡು ತಾಲೂಕು ಮಂಚಳ್ಳಿ ಗ್ರಾಮದ ನಿವಾಸಿಯಾದ ಲಕ್ಷ್ಮಿ 10 ತಿಂಗಳ ಹಿಂದೆ ಹುಣಸೂರಿನ ಯೋಗೇಶ್ ಜೊತೆ ಮದುವೆಯಾಗಿದ್ದರು. ಆದರೆ ತಮ್ಮ ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯೋಗೇಶ್ ಅನ್ನು ಮದುವೆಯಾಗುವ ವೇಳೆ ಲಕ್ಷ್ಮಿ ಪೋಷಕರು ವರದಕ್ಷಿಣೆ ಎಂದು 50 ಲಕ್ಷ ದುಡ್ಡು, 400 ಗ್ರಾಂ ಚಿನ್ನ ನೀಡಿದ್ದರು. ಆದರೆ ಮದುವೆ ಸಮಯದಲ್ಲಿ ಒಂದು ನಿವೇಶನ ಕೊಡುತ್ತೇವೆ ಎಂದು ಲಕ್ಷ್ಮಿಯ ಪೋಷಕರು ಒಪ್ಪಿಕೊಂಡಿದ್ದರಂತೆ. ಆದರೆ ನಿವೇಶನ ನೀಡುವುದು ವಿಳಂಬವಾಗಿತ್ತು. ಈ ಕಾರಣದಿಂದ ಲಕ್ಷ್ಮಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ.
ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಲಕ್ಷ್ಮಿ ಗರ್ಭಿಣಿಯಾಗಿದ್ದರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.