ಬೆಳಗಾವಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಗೈರಾಗಿದ್ದ ಶಾಸಕ ರಮೇಶ್ ಜಾರಕಿಹೊಳಿ ಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ಬೆಳಗಾವಿಯಲ್ಲಿ ಸಚಿವ ಭೈರತಿ ಬಸವರಾಜು ಹೇಳಿದ್ದಾರೆ.
ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರ ಸ್ಥಾನದ ಉಪಚುನಾವಣೆಯ ಪ್ರಚಾರಕ್ಕಾಗಿ ತೆರಳುವ ಸಂದರ್ಭ ಮಾತನಾಡಿದ ಅವರು, ಪ್ರಚಾರಕ್ಕೆ ಕರೆಯಲು ನಾನು ರಮೇಶ್ ಜಾರಕಿಹೊಳಿ ಅವರಿಗೆ ಫೋನ್ ಮಾಡಿದ್ದೆ ಆದರೆ ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವ ವಿಚಾರವನ್ನು ನನಗೆ ತಿಳಿಸಿದ್ದಾರೆ. ಹೀಗಾಗಿ ಪ್ರಚಾರಕ್ಕೆ ಬರೋದು ಡೌಟ್ ಎಂದು ಹೇಳುವ ಮೂಲಕ ಸಿಡಿ ಕೇಸ್ಗೆ ಮತ್ತಷ್ಟು ಟ್ವಿಸ್ಟ್ ನೀಡಿದ್ದಾರೆ.
ಈಗಾಗಲೇ ಎಸ್ಐಟಿ ವಿಚಾರಣೆಗೂ ಅನಾರೋಗ್ಯ ನೆಪವೊಡ್ಡಿ ತಪ್ಪಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈಗಾಗಲೇ ಎಸ್ಐಟಿ ತನಿಖಾಧಿಕಾರಿಗಳು ರಮೇಶ್ ಜಾರಕಿಹೊಳಿಗೆ ನೋಟಿಸ್ ನೀಡಿ ಏ. 5 ರ ಸೋಮವಾರ ಬೆಳಗ್ಗೆ 11ರ ಒಳಗೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದರು.
Comments are closed.