ಮನೋರಂಜನೆ

ಶ್ರೀರಾಮುಲು ವಿರುದ್ಧ ಪ್ರಚಾರ ಮಾಡುವುದಿಲ್ಲ: ಟ್ವೀಟ್’ನಲ್ಲಿ ಸುದೀಪ್ ಸ್ಪಷ್ಟನೆ

Pinterest LinkedIn Tumblr

ಬೆಂಗಳೂರು: ಬಾದಾಮಿಯ ಬಿಜೆಪಿ ಅಭ್ಯರ್ಥಿ ಶೀರಾಮುಲು ವಿರುದ್ಧ ನಟ ಸುದೀಪ್ ಪ್ರಚಾರ ಕೈಗೊಳ್ಳಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಸುದೀಪ್, ಇದರಲ್ಲಿ ಸತ್ಯಾಂಶವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರಚಾರ ಕೈಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಸುದೀಪ್ ಅವರು, ನಾನು ಬಾದಾಮಿಯಲ್ಲಿ ಶ್ರೀರಾಮುಲು ಅವರ ವಿರುದ್ಧ ಪ್ರಚಾರ ಕೈಗೊಳ್ಳುತ್ತೇನೆ ಎಂಬ ವಿಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ. ಶ್ರೀರಾಮುಲು ಅವರು ನನಗೆ ಬಹಳ ವರ್ಷಗಳಿಂದ ಗೊತ್ತಿರುವ ವ್ಯಕ್ತಿ. ಅವರಿಗೆ ಶುಭಹಾರೈಸುತ್ತೇನೆ’ ಎಂದಿದ್ದಾರೆ.

ನನ್ನ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿದ ಬಗ್ಗೆ ನಾನು ಕ್ಷಮೆಯಾಚಿಸುತ್ತೇನೆ. ಮಾಧ್ಯಮಗಳು ಸುದ್ದಿ ಬಿತ್ತರಿಸುವ ಮೊದಲು ಪೂರ್ವ–ಪರ ವಿಚಾರಿಸಿಕೊಳ್ಳುವುದು ಉತ್ತಮ. ಇದರಿಂದ ಎಲ್ಲರಿಗೂ ಒಳಿತಾಗಲಿದೆ. ಯಾವಾಗಲೂ ಎಲ್ಲರ ಮೇಲೂ ಪ್ರೀತಿ ಇರಲಿದೆ ಎಂದು ಟ್ವೀಟ್ ಮಾಡಿದ್ದಾರೆ.

Comments are closed.