ಬೆಂಗಳೂರು: ಇತ್ತೀಚೆಗೆ ಭಾರಿ ಸುದ್ದಿಯಾಗಿರುವ ಮೀ ಟೂ ಅಭಿಯಾನದ ಬಗ್ಗೆ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀ ಟೂ ಅಭಿಯಾನದಿಂದಾಗಿಯೇ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಮೀ ಟೂ ಅಭಿಯಾನದಿಂದ ಎಲ್ಲರೂ ಅವರ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಇದರಿಂದ ತುಂಬ ಖುಷಿ ಆಗುತ್ತಿದೆ ಎಂದು ತಿಳಿಸಿದರು.
ನಟ ಅರ್ಜುನ್ ಸರ್ಜಾ ಹಾಗೂ ನಟಿ ಶೃತಿ ಹರಿಹರನ್ ವಿವಾದದ ಬಗ್ಗೆ ಪ್ರಶ್ನಿಸಿದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅರ್ಜುನ್ ಸರ್ಜಾ – ಶೃತಿ ಪ್ರಕರಣ ನಾನೇನು ಹೇಳಲಿ ಎಂದು ನುಣುಚಿಕೊಂಡರು.
Comments are closed.