India

ತೆರಿಗೆ ವಂಚನೆ ಆರೋಪ: ಕಾನ್ಪುರ ಉದ್ಯಮಿಯಿಂದ 280 ಕೋಟಿ ನಗದು, 25 ಕೆ.ಜಿ ಚಿನ್ನ ವಶಕ್ಕೆ; ಬಂಧನ

Pinterest LinkedIn Tumblr

ಕಾನ್ಪುರ: ತೆರಿಗೆ ವಂಚನೆ ಆರೋಪದ ಮೇಲೆ ಕೇಂದ್ರೀಯ ಸಂಸ್ಥೆಗಳು ಕಾನ್ಪುರ ಮೂಲದ ಉದ್ಯಮಿ ಪಿಯೂಷ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಹೆಚ್ಚಿನ ತನಿಖೆಗಾಗಿ ಸುಗಂಧ ದ್ರವ್ಯ ಉದ್ಯಮಿಯನ್ನು ಕಾನ್ಪುರದಿಂದ ಅಹಮದಾಬಾದ್‌ಗೆ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ತೆರಿಗೆ ವಂಚನೆ ಆರೋಪದ ಮೇಲೆ ಪಿಯೂಷ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಸರಕು ಮತ್ತು ಸೇವಾ ತೆರಿಗೆಯ ಜಂಟಿ ಆಯುಕ್ತ(ಕಾನ್ಪುರ) ಸುರೇಂದ್ರ ಕುಮಾರ್ ಅವರು ತಿಳಿಸಿದ್ದಾರೆ. ಜಿಎಸ್​ಟಿಯ ಉತ್ತರ ಪ್ರದೇಶ, ಗುಜರಾತ್​ ಘಟಕಗಳ ಅಧಿಕಾರಿಗಳು ಸೇರಿ ಪಿಯುಷ್​ ಜೈನ್​ ಮನೆ ಮತ್ತು ಆತನಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಕಳೆದ ವಾರ ಜೈನ್ ಒಡೆತನದ ಕಂಪನಿ, ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ನಗದು ಸೇರಿದಂತೆ 280ಕೋಟಿ ನಗದು, 25 ಕೆ.ಜಿ ಚಿನ್ನ ಮತ್ತು 250ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ಇನ್‌ವಾಯ್ಸ್‌ಗಳ ಮೂಲಕ ಮತ್ತು ಇ-ವೇ ಬಿಲ್‌ಗಳಿಲ್ಲದೆ ಸರಕು ಸಾಗಣೆದಾರರಿಂದ ಸರಕುಗಳ ರವಾನೆಗೆ ಹಣವನ್ನು ಲಿಂಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಾಲ್ಕನೇ ದಿನವೂ ದಾಳಿ ಮುಂದುವರೆದಿದೆ. ಇನ್ನಷ್ಟು ಹೆಚ್ಚಿನ ನಗದು ಪತ್ತೆಯಾಗುವ ಸಾಧ್ಯತೆ ಇದೆ. 40 ತಾಸುಗಳಿಂದಲೂ ಪಿಯುಷ್​ಗೆ ಸಂಬಂಧಪಟ್ಟ ಮನೆಗಳು, ಕಚೇರಿಗಳಲ್ಲಿ ತಪಾಸಣೆ ನಡೆದಿದ್ದು, ಹಣ ಎಣಿಕೆ ಕಾರ್ಯ ನಡೆಯುತ್ತಲೇ ಇದೆ. ಮನೆಗಳಲ್ಲಿರುವ ಕೆಲವು ಕೋಣೆಗಳ ಬಾಗಿಲನ್ನು ತೆಗೆಯಲು ಬಾರದ ಕಾರಣ ಬೀಗ ತೆಗೆಯುವವರನ್ನೂ ಕರೆಸಲಾಗಿದೆ.

Comments are closed.