India

ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

Pinterest LinkedIn Tumblr

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಾರ್ಕೂರು‌ ಮೂಲದ ನಾಗೇಶ್ ಪೂಜಾರಿ (31) ಎನ್ನುವಾತನಿಗೆ ಈ ಹಿಂದೆ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ಧುಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು.

ನಂತರ ಅ.16 ಬುಧವಾರದಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದು ಜಾಮೀನು‌ ಅರ್ಜಿ ಮೇಲಿನ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Comments are closed.