ಅನಿವಾಸಿ ಭಾರತೀಯರು

ನಾಳೆ (ಏ.24) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2017ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರದಾನ

Pinterest LinkedIn Tumblr

ಬೆಂಗಳೂರು: 2017ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ನಾಲ್ಕು ವರ್ಷಗಳ ನಂತರ ಸರಕಾರ ಪ್ರದಾನ ಮಾಡಲಾಗುತ್ತಿದೆ. ಡಾ.ರಾಜ್ ಕುಮಾರ್ ಹುಟ್ಟು ಹಬ್ಬದ ದಿನದಂದು (ಏ.24 ಭಾನುವಾರ) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2017ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.

ಪ್ರತಿ ವರ್ಷವೂ ಆಯಾ ವರ್ಷದ ಚಲನಚಿತ್ರ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿತ್ತು. 2017ರಿಂದ ಈವರೆಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿಲ್ಲ. 2017ರಲ್ಲಿ ಎರಡು ಬಾರಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದರೂ, ಕೆಲ ಕಾರಣಗಳಿಂದಾಗಿ ನಿಗದಿತ ದಿನಾಂಕಗಳಂದು ಅವುಗಳು ನಡೆಯಲಿಲ್ಲ.

2018 ನವೆಂಬರ್ 24 ರಂದು ಬೆಂಗಳೂರಿನಲ್ಲಿ 2017ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಿತ್ತು. ಮಂಡ್ಯದ ಬಳಿ ಬಸ್ಸು ಕೆರೆಗೆ ಬಿದ್ದು ಹಲವರು ಮೃತಪಟ್ಟಿದ್ದರು. ಅಲ್ಲದೆ ಅಂದು ನಟ ಅಂಬರೀಶ್ ಕೂಡ ನಿಧನರಾದರು. ಹಾಗಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿಲ್ಲ. ತರುವಾಯ ಕೊರೋನಾ ಮತ್ತಿತರ ಕಾರಣಗಳಿಂದಾಗಿ ಪ್ರಶಸ್ತಿ ವಿತರಿಸಲಿಲ್ಲ. ಕೊನೆಗೂ ಏ.24 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಸಮಾರಂಭದಲ್ಲಿ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಜಿ.ಎನ್.ಲಕ್ಷ್ಮೀಪತಿ, ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ನಿರ್ದೇಶಕಿ ಲಕ್ಷ್ಮಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಎಸ್.ನಾರಾಯಣ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆದರ್ಶ ಈಶ್ವರಪ್ಪ ಅವರ ‘ಶುದ್ದಿ’, ಕೂಡ್ಲು ರಾಮಕೃಷ್ಣ ನಿರ್ದೇಶನ, ಹರೀಶ್ ಶೇರಿಗಾರ್-ಶರ್ಮಿಳಾ‌ ಶೇರಿಗಾರ್ ನಿರ್ಮಾಣದ ‘ಮಾರ್ಚ್ 24’ ಮತ್ತು ಅಭಯ ಸಿಂಹ ನಿರ್ದೇಶನದ ‘ಪಡ್ಡಾಯಿ’ ಕ್ರಮವಾಗಿ ಪ್ರಥಮ, ದ್ವಿತಿಯಾ, ತೃತಿಯ ಪ್ರಶಸ್ತಿಗಳು ಪಡೆದಿವೆ. ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಪುನೀತ್ ರಾಜ್ಕುಮಾರ್ ನಟನೆಯ ‘ರಾಜಕುಮಾರ’ ಆಯ್ಕೆಯಾಗಿದೆ.

Comments are closed.