ಕರಾವಳಿ

ಸುರತ್ಕಲ್ ಬಳಿ ಎರಡು ತುಂಡು ಮಾಡಿದ ಮೃತದೇಹ ಪತ್ತೆ ; ಕೊಲೆ ಶಂಕೆ : ಸ್ಥಳದಲ್ಲಿ ಆತಂಕ

Pinterest LinkedIn Tumblr

ಸುರತ್ಕಲ್, ಜೂನ್. 2: ಸುರತ್ಕಲ್ ಸಮೀಪ ಇಂದು ಬೆಳಿಗ್ಗೆ ಗೋಣಿಚೀಲದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳದಲ್ಲಿ ಆತಂಕ ಸೃಷ್ಠಿಯಾಗಿದೆ.

ಸುರತ್ಕಲ್ ಸಮೀಪದ ಚೊಕ್ಕಬೆಟ್ಟುನಲ್ಲಿರುವ ಮೋರಿಯ ಕೆಳಗೆ ಶನಿವಾರ ಬೆಳಗ್ಗೆ 10:30ರ ಸುಮಾರಿಗೆ ಗೋಣಿಚೀಲದಲ್ಲಿ ತುಂಬಿಸಿದ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.

ದೇಹವನ್ನು ಎರಡು ತುಂಡು ಮಾಡಿ ಗೋಣಿ ಚೀಲದಲ್ಲಿ ತುಂಬಿಸಿಡಲಾಗಿದ್ದು, ಕೊಲೆ ಮಾಡಿ, ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿಸಿ ಮೋರಿಯ ಕೆಳಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಮೃತರು ಸುಮಾರು 55 ವರ್ಷ ವಯಸ್ಸಿನವರು ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಇನ್ನಷ್ಟೇ ತಿಳಿದು ಬರಬೇಕಿದೆ.

Comments are closed.