ಕರಾವಳಿ

ಕುಂದಾಪುರದ ಅಂಪಾರಿನಲ್ಲಿ ಬಸ್-ಕಾರು ನಡುವೆ ಭೀಕರ ಅಪಘಾತ; ಇಬ್ಬರು ಗಂಭೀರ(Breaking)

Pinterest LinkedIn Tumblr

ಕುಂದಾಪುರ: ಖಾಸಗಿ (ದುರ್ಗಾಂಬ) ಬಸ್ ಹಾಗೂ ಸ್ಯಾಂಟ್ರೋ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು ಮೂರ್ನಾಲ್ಕು ಮಂದಿ ಗಾಯಗೊಂಡ ಘಟನೆ ಭಾನುವಾರ ಸಂಜೆ ಕುಂದಾಪುರ ತಾಲೂಕಿನ ಅಂಪಾರು ಸಮೀಪದಲ್ಲಿ ನಡೆದಿದೆ.

ಗಾಯಾಳು ಯುವಕರನ್ನು ತೆಕ್ಕಟ್ಟೆ ಸಮೀಪದ ಮಲ್ಯಾಡಿ, ಉಳ್ತೂರು ಆಸುಪಾಸಿನವರು ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡಿದ್ದಾರೆನ್ನಲಾಗಿದೆ. ಇವರೆಲ್ಲರೂ ಪ್ರವಾಸಕ್ಕೆ ತೆರಳಿ ವಾಪಾಸ್ ಕುಂದಾಪುರದತ್ತಪ್ರಯಾಣಿಸುತ್ತಿದ್ದರೆಂಬ ಮಾಹಿತಿಯಿದೆ.

ಕುಂದಾಪುರದಿಂದ ಅಂಪಾರಿನತ್ತ ಸಾಗುತ್ತಿದ್ದ ಬಸ್ಸು ಹಾಗೂ ಅಂಪಾರುಕಡೆಯಿಂದ ಕುಂದಾಪುರದತ್ತ ಬರುತ್ತಿದ್ದ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಿ….)

Comments are closed.