ಕರಾವಳಿ

ಹರೀಶ್ ಶೆಟ್ಟಿ ಹಲ್ಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಬಜರಂಗದಳ ಆಗ್ರಹ ; ಮೈತ್ರಿ ಸರ್ಕಾರದಿಂದ ಆರೋಪಿಗಳ ರಕ್ಷಣೆ, ಆರೋಪ

Pinterest LinkedIn Tumblr

ವಿಶ್ವಹಿಂದೂ ಪರಿಷದ್ ಅಧ್ಯಕ್ಷ ಹರೀಶ್ ಶೆಟ್ಟಿ

ಮಂಗಳೂರು :ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರದಲ್ಲಿ ವಿಶ್ವಹಿಂದೂ ಪರಿಷದ್ ಅಧ್ಯಕ್ಷರಾದ ಹರೀಶ್ ಶೆಟ್ಟಿಯವರ ಮೇಲೆ ಮಾರಣಾಂತಿಕ ಹಲ್ಲೆ ನೆಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕ್ಕೊಳಪಡಿಸುವಂತೆ ಬಜರಂಗದಳ ವಿಭಾಗ ಸಂಚಾಲಕ್ ಭುಜಂಗ ಕುಲಾಲ್ ಒತ್ತಾಯಿಸಿದ್ದಾರೆ.

ಮೈತ್ರಿ ಸರಕಾರ ಪೊಲೀಸ್ ಇಲಾಖೆಗೆ ಒತ್ತಡ ಹೇರಿ ಆರೋಪಿಗಳನ್ನು ರಕ್ಷಿಸುವ ಕೆಲಸವನ್ನು ಮಾಡುತ್ತಿದ್ದು , ನೈಜ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, 3 ದಿನಗಳ ಒಳಗೆ ಬಂಧಿಸದೇ ಹೋದರೆ ಉಗ್ರಹೋರಾಟ ನಡೆಸಲಾಗುವುದು ಎಂದು ಭುಜಂಗ ಕುಲಾಲ್ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.