ಕರಾವಳಿ

ಕುಂದಾಪುರದ ಸಿದ್ದಾಪುರದಲ್ಲಿ ಬಾವಿಗೆ ಬಿದ್ದ ಕಾಳಿಂಗ ಸರ್ಪ ರಕ್ಷಣೆ

Pinterest LinkedIn Tumblr

ಕುಂದಾಪುರ: ನಾಡಿಗೆ ಬಂದು ಬಾವಿಗೆ ಬಿದ್ದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬಂದಿ ತನ್ನಮಿಂಚಿನ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಕುಂದಾಪುರ ತಾಲೂಕು ಸಿದ್ದಾಪುರ ಅತ್ಮಿಜೆಡ್ಡು ಎಂಬಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಚಂದ್ರ ಕೊಠಾರಿ ಎನ್ನುವರ ಮನೆಯ ಬಾವಿಗೆ ಬಿದ್ದ ಕಾಳಿಂಗ ಸರ್ಪವು ಮೇಲೆ ಬರಲಾಗದೇ ಒದ್ದಾಡುತ್ತಿತ್ತು. ಇದನ್ನು ಕಂಡ ಮನೆಯವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಇಲಾಖೆ ಸಿಬ್ಬಂದಿ ಕೃಷ್ಣಮೂರ್ತಿ ಹೆಬ್ಬಾರ್ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಮೂಲಕ ಸರ್ಪವನ್ನು ರಕ್ಷಿಸಿದ್ದಾರೆ. ಕೃಷ್ಣಮೂರ್ತಿಯವರು ಈ ಹಿಂದೆಯೂ ಕೂಡ ಕಾಳಿಂಗ ಸರ್ಪವನ್ನು ಹಿಡಿದಿದ್ದು ಇಲ್ಲಿ ಸ್ಮರಿಸಬಹುದು.

13 ಅಡಿ ಉದ್ದ 15 ಕೆ.ಜಿ ತೂಕದ ಬೃಹತ್ ಕಾಳಿಂಗ ಸರ್ಪ ಇದಾಗಿದ್ದು ರಕ್ಷಿಸಿದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

Comments are closed.