ಕರಾವಳಿ

ಉಡುಪಿ ಶ್ರೀಕೃಷ್ಣನೇ ಪೇಜಾವರ ಶ್ರೀಗಳನ್ನು ಉಳಿಸಿಕೊಳ್ಳುತ್ತಾನೆ: ಕೆ.ಎಸ್. ಈಶ್ವರಪ್ಪ

Pinterest LinkedIn Tumblr

ಉಡುಪಿ: ಜೀವನ ಪರ್ಯಂತ ಪೇಜಾವರ ಶ್ರೀಗಳು ಶ್ರೀಕೃಷ್ಣನ ಸೇವೆ ಮಾಡಿದ್ದಾರೆ. ಅವರನ್ನು ಕೃಷ್ಣಪರಮಾತ್ಮನೇ ಉಳಿಸಿಕೊಳ್ಳಲಿ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ಸಚಿವ ಕೆ.ಎಸ್ ಈಶ್ಚರಪ್ಪ ಪ್ರಾರ್ಥಿಸಿದ್ದಾರೆ.

ಉಡುಪಿಯ ಮಣಿಪಾಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳ ಜೀವನವೇ ನಮಗೆ ಆದರ್ಶ. ವೈದ್ಯರು 48 ಗಂಟೆ ಗಡುವು ಕೊಟ್ಟಿದ್ದಾರೆ. ಶ್ರೀಗಳು ನಿರಂತರ ಶ್ರೀಕೃಷ್ಣನ ಸೇವೆ ಮಾಡಿದವರು, ಕೃಷ್ಣ ಪೇಜಾವರ ಶ್ರೀಗಳನ್ನು ಉಳಿಸಿಕೊಳ್ಳಬೇಕು. ಅವರು ಜಾತಿ ಮೀರಿ ಕೆಲಸ ಮಾಡಿದ್ದಾರೆ. ಶ್ರೀಳು ದೇವರಿಗೆ ಸಮಾನ. ಅವರನ್ನು ಕಾಪಾಡಪ್ಪ ಅಂತ ಭಗವಂತನಲ್ಲಿ ಮಾತ್ರ ಕೇಳಿಕೊಳ್ಳುತ್ತೇನೆ ಎಂದರು.

ಪೇಜಾವರ ಶ್ರೀಗಳು ಹತ್ತಾರು ವರ್ಷ ಬದುಕಿ ಬಾಳಬೇಕು. ಭಗವಂತನ ಬಳಿ ಪ್ರಾರ್ಥಿಸಲೆಂದೇ ಉಡುಪಿಗೆ ಬಂದಿದ್ದೇನೆ. ನಮಗೆ ಅವರ ಮಾರ್ಗದರ್ಶನ ಮಾಡಬೇಕಾಗಿದೆ ಎಂದು ಸಚಿವರು ಹೇಳಿದರು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ ಹಲವು ಗಣ್ಯರು ಆಸ್ಪತ್ರೆ ಭೇಟಿ ನೀಡಿದರು.

Comments are closed.