ಕರಾವಳಿ

ಜನೌಷಧಿ ಕೇಂದ್ರಗಳನ್ನು ಬೆಳಿಗ್ಗೆ 7 ಗಂಟೆಗೆ ತೆರೆಯಲು ಸಚಿವ ಕೋಟ ಸೂಚನೆ

Pinterest LinkedIn Tumblr

ಮಂಗಳೂರು ; ಕೇಂದ್ರ ಸರ್ಕಾರದ ಜನೋಪಯೋಗಿ ಯೋಜನೆಯಾದ, ಜನೌಷಧಿ ಕೇಂದ್ರವನ್ನು ಬೆಳಿಗ್ಗೆ 9 ಗಂಟೆ ನಂತರ ತೆರೆಯುವುದರಿಂದ ಅನೇಕರಿಗೆ ತೊಂದರೆಯಾಗುತ್ತಿದೆ ಎಂಬ ದೂರು ಬರುತ್ತಿದ್ದು, ದಿನಾಂಕ 14-4-2020 ರ ಮಂಗಳವಾರದಿಂದ ಬೆಳಿಗ್ಗೆ 7 ಗಂಟೆಗೆ ತೆರೆಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನೌಷಧಿ ಕೇಂದ್ರಗಳ ಮೇಲ್ವಿಚಾರಕ ಅಧಿಕಾರಿಗಳಿಗೆ ಅಧಿಕೃತ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34 ಹಾಗೂ ಉಡುಪಿ ಜಿಲ್ಲೆಯಲ್ಲಿ 27 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯವೆಸಗುತ್ತಿದ್ದು, ಸಮಯ ಹೊಂದಾಣಿಕೆಯಿಂದ ಜನಸಾಮಾನ್ಯರಿಗೆ ಕಡಿಮೆ ವೆಚ್ಚದಲ್ಲಿ ಔಷಧ ಸಿಗಲು ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Comments are closed.