ಕರಾವಳಿ

ನೊಂದವರ ಬಳಿಗೆ ಕಾಂಗ್ರೆಸ್ : ಮರೋಳಿಯಲ್ಲಿ ದಿನಸಿ ಕಿಟ್ ವಿತರಿಸಿ ಮಾಜಿ ಶಾಸಕ ಲೋಬೋ

Pinterest LinkedIn Tumblr

ಮಂಗಳೂರು : ಕಾಂಗ್ರೆಸ್ ಪಕ್ಷದ ವತಿಯಿಂದ  4.6.2021ರಂದು ಮರೋಳಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಕೋವಿಡ್ ಸಂದಿಗ್ದ ಪರಿಸ್ಥಿತಿಯಲ್ಲಿ ತೊಂದರೆ ಯಾದ ಬಡ ಜನರಿಗೆ ದಿನ ಸಾಮಗ್ರಿಗಳ ಕಿಟ್ ಗಳನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಜೆ. ಆರ್ ಲೋಬೊ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಕೋವಿಡ್ ನಿಟ್ಟಿನಲ್ಲಿ ಸರಕಾರ ವಿಧಿಸಿದ ಲಾಕ್ ಡೌನ್ ನಿಂದಾಗಿ ಜನಸಾಮಾನ್ಯರು ಬಹಳಷ್ಟು ತೊಂದರೆಯನ್ನು ಅನುಭವಿಸಿದ್ದಾರೆ. ಕೆಲಸವಿಲ್ಲದೇ ಜನರು ಜೀವನ ನಡೆಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಜನರಿಗೆ ಒಂದಿಷ್ಟು ಸಹಾಯ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಇಂದು ನೊಂದವರ ಬಳಿಗೆ ಬಂದಿದೆ ಎಂದರು.

ಕಾರ್ಯಕ್ರಮದಲ್ಲಿ ಮರೋಳಿ ವಾರ್ಡ್ ಕಾರ್ಪೊರೇಟರ್ ಕೇಶವ ಮರೋಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಒಬಿಸಿ ಘಟಕ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಟಿ. ಕೆ. ಸುಧೀರ್, ನೀರಜ್ ಚಂದ್ರ ಪಾಲ್, ವಾರ್ಡ್ ಅಧ್ಯಕ್ಷ ಗಂಗಾಧರ್ ಪೂಜಾರಿ, ಜೋಯ್ ಕ್ರಾಸ್ತಾ, ಉದಯ್ ಕುಂದರ್, ಯಸ್ವಂತ್ ಪ್ರಭು, ಶಾನ್ ಡಿಸೋಜಾ, ಆಸ್ಟನ್ ಸಿಕ್ವೇರಾ, ಅಶೋಕ್, ಲಕ್ಷ್ಮಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Comments are closed.