ಮಂಗಳೂರು/ ಪುತ್ತೂರು, ಜೂನ್.28 : ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರ ಸಹೋದರ ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ.
ಅಯೋಧ್ಯೆ ಚಳುವಳಿಯ ಕರಸೇವಕ ನವೀನ್ ಕುಮಾರ್ ರೈ ಕುಂಜಾಡಿ (56) ಜೂನ್ 28ರಂದು ನಿಧನ ಹೊಂದಿದರು. ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ಆಗಿದ್ದ ಅವರು ಅನಾರೋಗ್ಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ತಾಯಿ ಸುಶೀಲಾವತಿ ರೈ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ತಂಗಿ ನಂದಿನಿ ಅವರನ್ನು ಅಗಲಿದ್ದಾರೆ.
Comments are closed.