ಉಡುಪಿ: ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಾಪು ವೃತ್ತ ವ್ಯಾಪ್ತಿಯ ಪೊಲೀಸರು ಕಾಪು ಪೇಟೆಯಲ್ಲಿಂದು (ಫೆ.11) ಬೆಳಿಗ್ಗೆ ಪಥ ಸಂಚಲನ ನಡೆಸಿದರು.
ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕಾಪು, ಪಡುಬಿದ್ರೆ, ಶಿರ್ವ ಠಾಣಾ ವ್ಯಾಪ್ತಿಯ ಸುಮಾರು 90 ಪೊಲೀಸರು ಈ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
ಕಾಪು ಪಿಎಸ್ಐ ತಿಮ್ಮೇಶ್, ಪಡುಬಿದಿರೆ ಎಸ್ಸೈ ಅಶೋಕ್ ಕುಮಾರ್, ಶಿರ್ವ ಎಸ್ಸೈ ಪ್ರಕಾಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಡಿಎಆರ್ ತುಕಡಿ ಕೂಡಾ ಪಾಲ್ಗೊಂಡಿತ್ತು.
Comments are closed.