ಕರಾವಳಿ

ಹೆಬ್ರಿಯ ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು

Pinterest LinkedIn Tumblr

ಉಡುಪಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ಬುಧವಾರದಂದು ನಡೆದಿದೆ.

ಮೃತ ಯುವಕ ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್ ರಾಜ್(28) ಎಂದು ಗುರುತಿಸಲಾಗಿದೆ.

ಇವರು ತನ್ನ ಸಂಬಂದಿಕರೊಂದಿಗೆ ವರಂಗ ಗ್ರಾಮದ ತಲಮನೆಯ ಹೊಳೆಯ ಬದಿಯಲ್ಲಿರುವ ಕಲ್ಲಿನ ಬಂಡೆಯ ಮೇಲಿದ್ದಾಗ ಕಾಲು ಜಾರಿದ ಕಾರಣ ಅವರು ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಮೃತ ಪಟ್ಟಿರುವುದಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Comments are closed.