ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಬಂಧನದ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಮಾಡಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೊಟೀಸ್ ಗೆ ಉತ್ತರ ನೀಡಬೇಕಾಗುತ್ತದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದರು.
Comments are closed.