ಉಡುಪಿ: ಕಾರ್ಕಳ ನಗರದ ತೆಳ್ಳಾರು ರಸ್ತೆ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್ ಕುಮಾರ್ ಶೆಟ್ಟಿ ಅವರ ಮನೆಯಲ್ಲಿ ಚಾರ್ಜ್ಗಿಟ್ಟ ಮೊಬೈಲ್ ಸ್ಫೋಟಗೊಂಡು ಇಡೀ ಮನೆ ಸುಟ್ಟುಹೋಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ.
ಎರಡು ಅಂತಸ್ತುಗಳ 6 ಕೋಣೆಗಳ ಮನೆಯಲ್ಲಿ ಮುಂಜಾನೆ 4 ಗಂಟೆ ವೇಳೆಗೆ ಅವಘಡ ಸಂಭವಿಸಿದೆ. ಮೊಬೈಲ್ನ್ನು ಸೋಫಾದ ಮೇಲೆ ಇರಿಸಿದ್ದ ಕಾರಣ ಸ್ಪೋಟಗೊಂಡ ಕೂಡಲೇ ಬೆಂಕಿ ಹತ್ತಿಕೊಂಡು ಇಡೀ ಮನೆಯನ್ನು ಆವರಿಸಿದೆ ಎನ್ನಲಾಗಿದೆ.
ಮಾಹಿತಿ ತಿಳಿದ ತತ್ಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿ ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಈ ವೇಳೆ ಮನೆಯಲ್ಲಿ ಎಸಿ ಆನ್ ಇದ್ದುದು ಕೂಡ ಬೆಂಕಿ ವ್ಯಾಪಿಸಲು ಕಾರಣ ಎನ್ನಲಾಗಿದೆ.
Comments are closed.