ಉಡುಪಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್, ಸಾಲ ನೀಡಿಕೆ ಏಜನ್ಸಿ ಹಾಗೂ ಲೇವದೇವಿ ದಾರರು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ಪ್ರತಿ ಬಂಧಕ) ಆದೇಶ 2025 ನಿಯಮದನ್ವಯ ಜಿಲ್ಲಾ ನೋಂದಣಿ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ತಿಳಿಸಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳು, ಸಾಲ ನೀಡಿಕೆ ಎಜೇಂನ್ಸಿ ಹಾಗೂ ಲೇವಾ ದೇವಿ ದಾರರು ನೀಡುವ ದುಬಾರಿ ಬಡ್ಡಿಗಳಿಂದ ಜನರು ತೊಂದರೆ ಗೋಳಗಾಗುವುದರ ಜೊತೆಗೆ ಕೆಲವು ಸಂಸ್ಥೆಗಳು ಬಲವಂತ ವಾಗಿ ವಸೂಲಾತಿ ಅದರಲ್ಲೂ ವಿಶೇಷವಾಗಿ ರೈತರು, ಮಹಿಳೆಯರು ಆರ್ಥಿಕ ದುರ್ಬಲರು ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆ ನಡೆಸುವ ಪ್ರಕರಣಗಳು ಆಗುತ್ತಿರುವ ಹಿನ್ನೆಲೆ,ಇವುಗಳ ನಿಯಂತ್ರಣಕ್ಕೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿ ಬಂಧಕ ) ಆದ್ಯದೇಶ 2025 ಜಾರಿಗೆ ತಂದಿದ್ದು, ಇದರ ಅನ್ವಯ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತುವ ಸಂಸ್ಥೆಗಳು ಕಡ್ಡಾಯವಾಗಿ ಮೂವತ್ತು ದಿನಗಳ ಒಳಗಾಗಿ ಸೂಕ್ತ ಪ್ರಾಧಿಕಾರದ ಮುಂದೆ ನೋಂದಣಿ ಕಡ್ಡಾಯವಾಗಿ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ , ಫೈನಾನ್ಸ್ ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದ ಅವರು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ತೊಂದರೆ ನೀಡುವಂತಹ ಪ್ರಕರಣಗಳು ಕೇಳಿ ಬರುತ್ತಿವೆ. ಕಾರಣ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದೇ ಇರುವುದೇ ಇದಕ್ಕೆ ಕಾರಣವಾಗಿದೆ ಎಂದರು.
ಆರ್.ಬಿ.ಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸ್ಗಳು ನಿಗಧೀತ ಮೊತ್ತದ ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಕರ್ನಾಟಕ ಸರ್ಕಾರದ ಹೊಸ ಆದೇಶದ ಅನ್ವಯ ಸಾಲಗಾರನನ್ನು ಅಥವಾ ಅವರ ಕುಟುಂಬದ ಸದಸ್ಯರಿಗೆ ಒತ್ತಡ ಹಾಕುವುದು, ತಡಯೊಡ್ಡುವುದು, ಹಿಂಸೆಯನ್ನು ಬಳಸುವುದು, ಬೆದರಿಸುವುದು, ಅವರನ್ನು ನಿರಂತರವಾಗಿ ಹಿಂಬಾಲಿಸುವುದು, ಸ್ವತ್ತಿನ ಬಳಕೆ ಅಡ್ಡಿಪಡಿಸುವುದು, ಹಣ ಪಾವತಿಗೆ ಬಲವಂತ ಹಾಗೂ ಅನುಚಿತ ಪ್ರಭಾವವನ್ನು ಬಳಸುವುದು ಸೇರಿದಂತೆ ಯಾವುದೇ ದೌರ್ಜನ್ಯಗಳನ್ನು ಸಾಲಗಾರನಿಂದ ಹಣ ವಸೂಲಾತಿಗಾಗಿ ಸ್ವತ ಹ ಅಥವಾ ಏಜೆಂಟಲ್ ಗಳ ಮೂಲಕ ಮಾಡುವಂತಿಲ್ಲ. ಒಂದು ವೇಳೆ ದೌರ್ಜನ್ಯ, ದಬ್ಬಾಳಿಕೆ ಯಂತಹ ಪ್ರಕರಣಗಳು ಮಾಡುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ರಾಜ್ಯ ಸರಕಾರ ಜಾರಿಗೆ ತಂದಿರುವ ಹೊಸ ನಿಯಮಗಳ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೋಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ, ಮೈಕ್ರೋ ಫೈನಾನ್ಸ್ ಗಳ ಮುಖ್ಯಸ್ಥರು , ಲೇವಾದೇವಿಗಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Comments are closed.