ಕರಾವಳಿ

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಕೊಲ್ಲೂರು ಶ್ರೀ‌‌ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

Pinterest LinkedIn Tumblr

ಕುಂದಾಪುರ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದರು.

ಕೊಲ್ಲೂರು ದೇವಿಯ ಭಕ್ತರಾದ ಇಳಯರಾಜ್ ಅವರು  ಪ್ರತಿವರ್ಷವೂ ಕೊಲ್ಲೂರಿಗೆ ಭೇಟಿ ನೀಡುತ್ತಾರೆ. ಈ ಭೇಟಿಯ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಸದಸ್ಯ ರಘುರಾಮ ದೇವಾಡಿಗ ಆಲೂರು,  ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್ ಶೆಟ್ಟಿ, ಹಿರಿಯ ಅರ್ಚಕ ಶ್ರೀಧರ್ ಅಡಿಗ ಮೊದಲಾದವರು ಇಳಯರಾಜ್ ಅವರನ್ನು ಗೌರವಿಸಿದರು.

Comments are closed.